ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಎಂದ ಮುನಿರತ್ನ


ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ವಿರುದ್ಧ ಸದ್ಯ ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಮಾದ್ಯಮದ ಜೊತೆ ಮಾತನಾಡಿರುವ ಶಾಸಕ ಮುನಿರತ್ನ, ನಾನು ಎಲ್ಲೂ ನಾಪತ್ತೆಯಾಗಿಲ್ಲ. ಆಡಿಯೋ ನನ್ನದೇ ಎಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 14: ತ್ಯಾಜ್ಯ ವಿಲೇವಾರಿ ಗುತ್ತಿಗೆ ವಿಚಾರವಾಗಿ ಗುತ್ತಿಗೆದಾರ ಚಲುವರಾಜುಗೆ ಶಾಸಕ ಮುನಿರತ್ನ (Munirathna) ಅವಾಚ್ಯವಾಗಿ ನಿಂದಿಸಿರೋದು ಆಡಿಯೋದಲ್ಲಿ ಬಯಲಾಗಿತ್ತು. ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ 2 ಎಫ್ಐಆರ್ ಕೂಡ ದಾಖಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದು, ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ನನ್ನನ್ನು ಮುಗಿಸಲು ಷಡ್ಯಂತ್ರ

ಟಿವಿ9 ಜೊತೆ ಮಾತನಾಡಿದ ಅವರು, ಆಡಿಯೋ ತಗೊಂಡು ಈಗಲೇ ಸ್ಪೀಕರ್‌ ಕಚೇರಿಗೆ ಚಲುವರಾಜ್ ಬರಲಿ. 2 ಸಮುದಾಯ ಸೇರಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಚಲುವರಾಜ್‌ ನನ್ನನ್ನು ಶ್ಲಾಘಿಸಿದ್ದರು. 7-8 ವರ್ಷಗಳಿಂದ ನನ್ನ ಜೊತೆಯಲ್ಲಿದ್ದರು, ಈಗ ನಾನು ಹಣ ಕೇಳ್ತೀನಾ ಎಂದು ಪ್ರಶ್ನಿಸಿದ್ದಾರೆ.



ರಾಜಕೀಯ ಪಿತೂರಿಯಿಂದ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ತಿಂಗಳ ಹಿಂದೆ ನನ್ನ ಬಳಿ ಬಂದು ಯಾರೋ ಹಲ್ಲೆ ಮಾಡಿದ್ದರು ಅಂದಿದ್ದರು. ನಾನು ಎಲ್ಲೂ ನಾಪತ್ತೆಯಾಗಿಲ್ಲ. ನನ್ನ ಸ್ನೇಹಿತರ ಮೂಲಕ ಭೇಟಿ ಮಾಡಲು ಚಲುವರಾಜ್‌ ಯತ್ನಿಸಿದ್ದರು ಎಂದಿದ್ದಾರೆ.

ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟಿದ್ದಕ್ಕೆ ನಾನು ಕೆಟ್ಟವನಾಗಿದ್ದೇನೆ

ನನ್ನ ಬಾಯಿ ಶುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಿಎಂರವರು ಮೊದಲು ತಮ್ಮ ಜೊತೆ ಇರುವವರ ಬಾಯಿ ಮುಚ್ಚಿಸಲಿ. ನಾನು ಕಾನೂನಿನ ಮೊರೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್‌ಐಆರ್

ನಾನು ಯಾವುದೇ ರೀತಿ ಭ್ರಷ್ಟಾಚಾರ ನಡೆಸಿಲ್ಲ. ಕಾಂಗ್ರೆಸ್‌ನಲ್ಲಿದ್ದಾಗ ನಾನು ತುಂಬಾ ಒಳ್ಳೆಯ ವ್ಯಕ್ತಿಯಾಗಿದ್ದೆ. ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟಿದ್ದಕ್ಕೆ ನಾನು ಕೆಟ್ಟವನು ಆಗಿಬಿಟ್ಟಿದ್ದೇನೆ ಎಂದಿದ್ದಾರೆ.


Next Post Previous Post

Advertisement

```
Ad 1

Advertisement

Advertisement

Advertisement