ಪುತ್ತೂರು ತಾಲೂಕು: ಕನ್ನಡ ರಾಜ್ಯೋತ್ಸವ ದಿನಾಚರಣೆ ಅದ್ದೂರಿಯಾಗಿ ಆಚರಿಸುವ ವಿಚಾರದಲ್ಲಿ ಪೂರ್ವಭಾವಿ ಸಭೆ
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಪೂ.8-00 ಗಂಟೆಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ದರ್ಬೆ ವೃತ್ತದಿಂದ ಕನ್ನಡ ಭುವನೇಶ್ವರಿಯ ಭಾವಚಿತ್ರದೊಂದಿಗೆ ವೈಭವದ ಮೆರವಣಿಗೆಯನ್ನು ನಡೆಸಲು ತೀರ್ಮಾನಿಸಲಾಗಿದೆ.
ಈ ಕುರಿತು ಚರ್ಚಿಸುವರೇ ಪುತ್ತೂರು ನಗರದಲ್ಲಿನ ವಿವಿಧ ಸಂಘ -ಸಂಸ್ಥೆಗಳ ಅಧ್ಯಕ್ಷರು/ಪದಾಧಿಕಾರಿಗಳ, ಸಾಹಿತಿಗಳ, ಕನ್ನಡ ಪ್ರೇಮಿಗಳ ಸಭೆಯನ್ನು ದಿನಾಂಕ: 22-10-2024 ರಂದು ಮಂಗಳವಾರ ಮದ್ಯಾಹ್ನ ಗಂಟೆ 03-00 ಕ್ಕೆ ಸರಿಯಾಗಿ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿಯ ಸಭಾಂಗಣದಲ್ಲಿ ಪುತ್ತೂರು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು.
ಈ ಸಭೆಗೆ ಕನ್ನಡ ಪ್ರೇಮಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಜರಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ 2024 ರ ಸಾಲಿನ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಂಪೂರ್ಣ ಸಹಕಾರವನ್ನು ನೀಡುವಂತೆ ಕೋರಿದೆ.
ತಹಶೀಲ್ದಾರರು ಮತ್ತು ಅಧ್ಯಕ್ಷರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುತ್ತೂರು ದ ಕ.