BIG BREAKING: ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ| ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಿಂದ 250ಕ್ಕೂ ಹೆಚ್ಚು ಜನರ ಸಾವು
ಮಣಿಪುರ ವಿಧಾನಸಭೆಯನ್ನು ಕೂಡಾ ಅಮಾನತುಗೊಳಿಸಲಾಗಿದೆ.
ಸಾಧ್ಯವಾಗದ ಒಮ್ಮತದ ನಿರ್ಧಾರ
ಬಿರೇನ್ ಸಿಂಗ್ ಅವರ ರಾಜೀನಾಮೆಯ ನಂತರ, ಮಣಿಪುರ ಬಿಜೆಪಿ ಶಾಸಕರು, ತಮಗೆ ಉತ್ತರಾಧಿಕಾರಿಯನ್ನು ಹುಡುಕಲು ಹೆಣಗಾಡುತ್ತಿದ್ದಾರೆ. ಬಿಜೆಪಿ ಶಾಸಕರ ಗುಂಪು ಈ ವಾರ ಪಕ್ಷದ ಈಶಾನ್ಯ ಸಂಯೋಜಕ ಸಂಬಿತ್ ಪಾತ್ರಾ ಅವರೊಂದಿಗೆ ಹಲವಾರು ಸಭೆಗಳನ್ನು ನಡೆಸಿದವು. ಆದರೂ ರಾಜ್ಯದ ಮುಂದಿನ ಸಿಎಂ ಯಾರಾಗಬಹುದು ಎಂಬ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲು ಪಕ್ಷದ ನಾಯಕರಿಂದ ಸಾಧ್ಯವಾಗಲಿಲ್ಲ. ಹೀಗಾಗಿ ಬಿರೇನ್ ಸಿಂಗ್ ರಾಜೀನಾಮೆಯಾಗಿ ನಾಲ್ಕು ದಿನವಾದರೂ ಹೊಸ ಮುಖ್ಯಮಂತ್ರಿ ಆಯ್ಕೆ ಆಗಲಿಲ್ಲ.
ರಾಜ್ಯದಲ್ಲಿ ಮೈಟಿ ಮತ್ತು ಕುಕಿ ಸಮುದಾಯಗಳ ನಡುವೆ ಪ್ರಾರಂಭವಾದ ಘರ್ಷಣೆಗಳಿಂದ ಸುಮಾರು 250 ಜನರು ಸಾವನ್ನಪ್ಪಿದ್ದರು. ಅಂದಿನಿಂದ ಇಡೀ ರಾಜ್ಯದಲ್ಲಿ ಇದು ದೊಡ್ಡ ಚರ್ಚೆಯಾಗಿದೆ. ಪ್ರತಿಪಕ್ಷಗಳು ಮತ್ತು ಕುಕಿ ಸಮುದಾಯವು ಹಿಂಸಾಚಾರದ ಉಲ್ಬಣಕ್ಕೆ ಬಿರೇನ್ ಸಿಂಗ್ ಅವರನ್ನು ಹೊಣೆಗಾರರನ್ನಾಗಿ ಮಾಡಿದವು. ಹೀಗಾಗಿ ಅವರು ರಾಜೀನಾಮೆ ಸಲ್ಲಿಸಬೇಕಾಯ್ತು. ಆ ನಂತರ ಹೊಸ ಸಿಎಂ ಅಧಿಕಾರ ಸ್ವೀಕರಿಸದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.