BREAKING ಬಂಟ್ವಾಳ: ಇಬ್ಬರು ಮುಸ್ಲಿಂ ಯುವಕರಿಗೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ; ಓರ್ವ ಮೃತ್ಯು| ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ ತಾಲೂಕು ಸೇರಿದಂತೆ ಐದು ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
ಹಲ್ಲೆಗೀಡಾದ ರಹೀಂ ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದ್ದು, ಶಾಫಿ ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪಿಕಪ್ ಮಾಲೀಕ ರಹೀಂ ಮನೆಯೊಂದರ ಬಳಿ ಮರಳು ಅನ್’ಲೋಡ್ ಮಾಡಿ ವಾಪಾಸಾಗುವ ಸಮಯದಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ತಲ್ವಾರ್ ನಿಂದ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ!!
ದಕ್ಷಿಣಕನ್ನಡ : ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ