ಪುತ್ತೂರು ತಾಲೂಕು ಸೀರತ್ ಕಮಿಟಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಗೊಳ ಪಟ್ಟ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪುತ್ತೂರು ತಾಲೂಕು ಸೀರತ್ ಕಮಿಟಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಂಕಪಟ್ಟಿ ಪ್ರತಿ ಆಧಾರ್ ಕಾರ್ಡ್ ಪ್ರತಿ , ಭಾವ ಚಿತ್ರ ಮತ್ತು ಬಿಳಿಹಾಳೆಯಲ್ಲಿ ಅರ್ಜಿಯೊಂದಿಗೆ ದಿನಾಂಕ 10-06-2025 ರ ಒಳಗೆ ಪುತ್ತೂರು ಕೇಂದ್ರ ಜುಮಾ ಮಸೀದಿ ಕಟ್ಟಡದಲ್ಲಿರುವ ಪುತ್ತೂರು ತಾಲೂಕು ಸೀರತ್ ಕಮಿಟಿ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಸುರಯ್ಯ ಕೂರ್ನಡ್ಕ ಪ್ರಧಾನ ಕಾರ್ಯದರ್ಶಿ ಡಾ ಹಾಜಿ ಎಸ್ ಅಬೂಬಕರ್ ಅರ್ಲಪದವು ಕೋಶಾಧಿಕಾರಿ ಎಲ್ ಟಿ ಅಬ್ದುಲ್ ರಜಾಕ್ ಹಾಜಿ ಜಂಟಿ ಹೇಳಿಕೆಯಲ್ಲಿ ತಿಳಿಸಿರುತ್ತಾರೆ ಹೆಚ್ಚಿನ ಮಾಹಿತಿಗಾಗಿ 9448461885 , 9901726144
ನಂಬ್ರವನ್ನು ಸಂಪರ್ಕಿಸಬಹುದು.