ಬಂಧುತ್ವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಬ್ಯಾಗ್ ವಿತರಣೆ ಕಾರ್ಯಕ್ರಮ


ಸಮಾಜದ ಪ್ರಗತಿ ಬಂಧುತ್ವ ಚಾರಿಟೇಬಲ್ ಟ್ರಸ್ಟ್ ನ ಧೈಯ: ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ

ಮಂಗಳೂರು: ಸಮಾಜ ಸೇವೆಯನ್ನೇ ಗುರಿಯಾಗಿಸಿ, ಬಡವರ, ಧಮನಿತರ ಕಣ್ಣೀರನ್ನು ಒರೆಸುವ ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ಬಂಧುತ್ವ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ನೇತೃತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಆದಿತ್ಯವಾರ ಬಂಮಧುತ್ವ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು.



ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಬಂಧುತ್ವ ಎಂದರೆ ಹಿಂದೂ, ಮುಸ್ಲಿಮ್,ಕ್ರೈಸ್ತರು ಒಂದೇ ಆಗಿ ಬದುಕಿ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುವುದಾಗಿದೆ, ನಮ್ಮ ಚಾರಿಟೇಬಲ್ ಟ್ರಸ್ಟ್ ಮುಖಾಂತರ ಪ್ರತೀ ವರ್ಷವೂ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಮಾಡುತ್ತಾ ಬಂದಿರುತ್ತೇನೆ, ಅದೂ ಅಲ್ಲದೆ ಬಡ ಕುಟುಂಬಕ್ಕೆ ಎರಡು ಮನೆ ನಿರ್ಮಿಸಿ ಕೊಟ್ಟಿದ್ದೇವೆ, 



ಹಲವಾರು ರೋಗಿಗಳ ವೈದ್ಯಕೀಯ ಶುಲ್ಕವನ್ನು ಭರಿಸಿದ್ದೇವೆ, ಕೊರೋನಾ ಕಾಲಘಟ್ಟದಲ್ಲಿ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿಗಳನ್ನು ನೀಡಿದ್ದೇವೆ, ಇದಕ್ಕೆ ಸಹಕರಿಸಿದ ದಾನಿಗಳಿಗೆ ಧನ್ಯವಾದ, ಮತ್ತು ಇಂದು ಪುಸ್ತಕ ಸ್ವೀಕರಿಸಿದ ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು, ಸಮಾಜಕ್ಕೆ ಮತ್ತು ದೇಶಕ್ಕೆ ಹೆಸರುತರುವಂತಾಗಬೇಕು ಎಂದು ಹೇಳಿದರು.
ಪತ್ರಕರ್ತ ಅಬ್ದುಲ್ ಅಝೀಝ್ ಪುಣಚ ದುಆ ನೆರವೇರಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಪತ್ರಕರ್ತ ಲೋಹಾನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು.


ಸಮಾಜ ಸೇವಕ ಅಬಿಮೋ ಸಂಸ್ಥೆಯ ಅಧ್ಯಕ್ಷ ನವೀನ್ ನಾಯಕ್, ಸಮಾಜ ಸೇವಕ ಅಹ್ಮದ್ ಶರೀಫ್, ಬಂಧುತ್ವ ಚಾರಿಟೇಬಲ್ ಟ್ರಸ್ಟಿನ ಟ್ರಸ್ಟಿಗಳಾದ ಅಬ್ದುಲ್ ನಝೀರ್, ಆಶೀಫ್ ಬಬ್ಬುಕಟ್ಟೆ, ಸದಸ್ಯರಾದ ಇಂತಿಯಾಝ್ ಹುಸೈನ್, ಮಕ್ಬೂಲ್, ಝೀಶಾನ್,ಝುಬೈದಾ, ಸೌಮ್ಯ, ಮೈಮೂನಾ, ಶಮೀಮಾ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರೀನ್ ಸಿಟಿಯ ಹಂಝ, ನಾಟಿ ವೈದ್ಯ ಮೊಹಮ್ಮದ್ ಕುಂಞಿ, ಸಾಮಾಜಿಕ ಕಾರ್ಯಕರ್ತ ಅಶ್ರಫ್ ಅವರನ್ನು ಸನ್ಮಾನಿಸಲಾಯಿತು.
Next Post Previous Post

Select Your Language

Ad 1
Ad 2
Ad 3

Advertisement

Advertisement

Advertisement