BREAKING NEWS: ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ ಸಜಿಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ..!
ಮಂಗಳೂರು: ದ ಕ ಜಿಲ್ಲೆಯಲ್ಲಿ ಮತ್ತೆ ತಲವಾರು ದಾಳಿ ಅಟ್ಟಹಾಸ ಮರೆದಿದ್ದು ಬಂಟ್ವಾಳ ತಾಲೂಕಿನ ಸಜೀಪ ಎಂಬಲ್ಲಿ ಇದೀಗ ಇಬ್ಬರು ಯುವಕರ ಮೇಲೆ ತಲವಾರು ದಾಳಿ ನಡೆದಿದೆ ಎನ್ನಲಾಗಿದೆ.
ಸಜಿಪದ ದೇರಾಜೆ ಎಂಬಲ್ಲಿ ಕೆಲಸ ಬಿಟ್ಟುಮನೆಗೆ ತೆರಳುತ್ತಿದ್ದ ಇಬ್ಬರು ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ ನಡೆದಿದ್ದು ತಕ್ಷಣವೇ ಎಚ್ಚೆತ್ತುಕೊಂಡ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಮತ್ತೆ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಸ್ಥಳದಲ್ಲಿ ಆಕ್ರೋಷಿತ ಮುಸ್ಲಿಂ ಯುವಕರ ಗುಂಪೇ ನೆರೆದಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.