BREAKING NEWS: ಬಂಟ್ವಾಳ ಅಬ್ದುಲ್ ರಹೀಂ ಕೊಲೆ ಪ್ರಕರಣ: ಪೊಲೀಸರಿಂದ ಭರತ್ ಕುಮ್ಡೇಲ್ ಮನೆ ಶೋಧ


ಫರಂಗಿಪೇಟೆ: ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಭರತ್ ಕುಮ್ಡೇಲ್ ಮೆನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.


ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿ ತನಿಖಾ ತಂಡ ಇಂದು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕುಮ್ಡೇಲ್ ನಲ್ಲಿ ಮನೆ ಶೋಧ ಮಾಡಲಾಗಿದೆ.



ಮೇ 27ರಂದು ಕೊಳತ್ತಮಜಲಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದ (ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ. ಕ್ರ 54/2025 ಕಲಂ: 191(1), 191(2), 191(3), 118(1), 118 (2), 109, 103 ಜೊತೆಗೆ 190 ಬಿಎನ್‌ಎಸ್ 2023) ತನಿಖೆಗೆ ಸಂಬಂಧಿಸಿ ತನಿಖಾ ತಂಡವು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಭರತ್ ಕುಮ್ಡೇಲ್ ಮನೆಯನ್ನು ಶೋಧ ನಡೆಸಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Next Post Previous Post

Ad 1
Ad 2
Ad 3

Advertisement

Advertisement

Advertisement