BREAKING : RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್' ಸೇರಿದಂತೆ 15 ಜನರ ವಿರುದ್ಧ `FIR' ದಾಖಲು
ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಸಚಿವ, ಪ್ರಚೋದನಕಾರಿ ಭಾಷಣ ಮಾಡುವವರನ್ನು ಮಟ್ಟಹಾಕ್ತೀವಿ ಎಂದಿದ್ದರು. ಇದೆಲ್ಲದರ ಮಧ್ಯೆ ಇದೀಗ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಪ್ರಚೋದನಾತ್ಮಕವಾಗಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR
ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಬಿಎನ್ಎಸ್ 353(2)ರಡಿ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಹಿನ್ನೆಲೆ ರಾತ್ರೋರಾತ್ರಿ ಹಿಂದೂ ಸಂಘಟನೆ ಮುಖಂಡರ ಮನೆಗಳಿಗೆ ನೂತನ ಎಸ್ಪಿ ಭೇಟಿ ನೀಡಿದ್ದಾರೆ. ಹೀಗಾಗಿ ಪೊಲೀಸರು ಮಧ್ಯರಾತ್ರಿ ಮನೆಗೆ ಆಗಮಿಸುತ್ತಿದ್ದಾರೆ ಅಂತಾ ಕಾರ್ಯಕರ್ತರು ಆರೋಪಿಸಿದ್ದಾರೆ. ಪೊಲೀಸರ ಈ ನಡೆ ವಿರೋಧಿಸಿ ಠಾಣೆ ಎದುರು ಹಾಜರಾಗಿದ್ದಕ್ಕೆ ಎಫ್ಐಆರ್ ದಾಖಲಿಸಲಾಗಿದೆ. ಯಾವುದೇ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿರುತ್ತಾರೆ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಯಾರೆಲ್ಲಾ ವಿರುದ್ಧ ಎಫ್ಐಆರ್?
ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ರಾತ್ರೋರಾತ್ರಿ ಕಡಬ ತಾಲೂಕಿನ ವಿಹೆಚ್ಪಿ ಸಂಘಟನೆ ಮುಖಂಡರ ಮನೆಗಳಿಗೆ ಭೇಟಿ ನೀಡಿ, ಜಿಪಿಎಸ್ ಫೋಟೋ ತೆಗೆದು ಸಂಘಟನೆ ಮುಖಂಡರ ಮಾಹಿತಿ ಸಂಗ್ರಹಿಸುವ ಮೂಲಕ ಎಲ್ಲರ ಮೇಲೆ ಹದ್ದಿನಕಣ್ಣಿಟ್ಟಿದ್ದಾರೆ.