Mangaluru Airport:ಕತಾರ್ ಮೇಲೆ ಇರಾನ್ ದಾಳಿ: ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ |
ಮಂಗಳೂರಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಬಗ್ಗೆ ಏರ್ಪೋರ್ಟ್ ಆಡಳಿತ ಮಾಹಿತಿ ನೀಡಿದೆ. ವಿಮಾನ ನಿಲ್ದಾಣಕ್ಕೆ ಬರುವ ಮುನ್ನ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ.
ಮಂಗಳೂರು ವಿಮಾನ ನಿಲ್ದಾಣ ಎಕ್ಸ್ ಸಂದೇಶ
ಇಸ್ರೇಲ್ ಇರಾನ್ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಅಮೆರಿಕ ಕೂಡ ಇರಾನ್ನ ಪರಮಾಣು ಘಟಗಳ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆ, ಕೊಲ್ಲಿ ರಾಷ್ಟ್ರ ಕತಾರ್ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಮಾಹಿತಿ ನೀಡಿದ್ದು, ಇರಾನ್ ದಾಳಿಯಿಂದ ಅಮೆರಿಕ ನೆಲೆಗಳಿಗೆ ಏನೂ ಹಾನಿಯಾಗಿಲ್ಲ ಎಂದಿದ್ದಾರೆ.
ಈ ಸಂಘರ್ಷದ ಬೆನ್ನಲ್ಲೇ ಮಧ್ಯಪ್ರಾಚ್ಯ ದೇಶಗಳು ಏರ್ಸ್ಪೇಸ್ ಬಂದ್ ಮಾಡಿವೆ. ಇದರ ಬಿಸಿ ಮಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸ ಉಂಟಾಗಿದೆ. ಕೊಲ್ಲಿ ರಾಷ್ಟ್ರ ಕತಾರ್ನಲ್ಲಿರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ ಮಾಡಿರುವ ಕಾರಣ ಮಂಗಳೂರಿನಿಂದ ಹೊರಟಿದ್ದ ಏರ್ಇಂಡಿಯಾ ಎಕ್ಸ್ಪ್ರೆಸ್ ದಮ್ಮಾಮ್ಗೆ ಹೋಗುವ ಬದಲು ಮುಸ್ಕತ್ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿದ್ದು, ಇದೀಗ ಎರಡೂ ವಿಮಾನ ವಾಪಾಸು ಮಂಗಳೂರಿಗೆ ಬಂದಿದೆ.
ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಕುರಿತು ಏರ್ಪೋರ್ಟ್ ಆಡಳಿತ ಮಾಹಿತಿ ನೀಡಿದೆ.